alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಉಚಿತ ವಿದ್ಯುತ್ ಶೂನ್ಯ ಬಿಲ್ ನೀಡಿಕೆಗೆ ಇಂದು ಸಿಎಂ ಅಧಿಕೃತ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಉಚಿತ ವಿದ್ಯುತ್ ಶೂನ್ಯ ಬಿಲ್ ನೀಡಿಕೆಗೆ ಇಂದು ಸಿಎಂ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಬಿಲ್ ನೀಡಿಕೆ ಆ. 1 ರಿಂದ ಆರಂಭವಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ.

ಮೊದಲ ತಿಂಗಳಲ್ಲಿ 1.42 ಕೋಟಿ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲಿವೆ. ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ವಿನಾಯಿತಿ ಸಿಗಲಿದೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್ ನಲ್ಲಿ ಪ್ರಯೋಜನ ಸಿಗಲಿದೆ.

ಆಗಸ್ಟ್ 1ರಿಂದ ಶೂನ್ಯ ಬಿಲ್ ವಿತರಣೆ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಅಧಿಕೃತ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮೊದಲಾದವರು ಭಾಗವಹಿಸಲಿದ್ದಾರೆ. ಸಾಂಕೇತಿಕವಾಗಿ 10 ಜನರಿಗೆ ಶೂನ್ಯ ಬಿಲ್ ವಿತರಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...