alex Certify BREAKING: ಗೃಹಪ್ರವೇಶದ ಊಟ ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೃಹಪ್ರವೇಶದ ಊಟ ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಹಾವೇರಿ: ಗೃಹಪ್ರವೇಶದ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ತಿಮ್ಮೇನಹಳ್ಳಿಯಲ್ಲಿ ನಡೆದಿದೆ.

ಬಸವರಾಜ್ ಶೇಖಪ್ಪ ಎಂಬುವವರ ಮನೆ ಗೃಹಪ್ರವೇಶ ಕಾರ್ಯಕ್ರಮ ನಿನ್ನೆ ನಡೆದಿತ್ತು. ನಿನ್ನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಸ್ವಸ್ಥರನ್ನು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಸಧ್ಯ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...