alex Certify ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮುಷ್ಕರ ಕೈಗೊಂಡಿದ್ದು, ಅವರ ಬೇಡಿಕೆ ಈಡೇರಿಸುವ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿ ಸದಸ್ಯ ಚಿದಾನಂದ ಗೌಡ 15 ದಿನಗಳಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಗೊಂಡಿದ್ದಾರೆ ಎಂದು ಸದನದಲ್ಲಿ ಗಮನ ಸೆಳೆದಾಗ ಸಚಿವರು ಪ್ರತಿಕ್ರಿಯೆ ನೀಡಿ, ಉಪನ್ಯಾಸಕರ ನಿಯೋಗ ಭೇಟಿ ಮಾಡಿ ಚರ್ಚಿಸಿದೆ. ಅತಿಥಿ ಉಪನ್ಯಾಸಕರ ಸಮಸ್ಯೆ ಮತ್ತು ಬೇಡಿಕೆಗಳು 20 ವರ್ಷಗಳಿಂದ ಬಗೆಹರಿದಿಲ್ಲ. ಎಲ್ಲವನ್ನು ಬಗೆಹರಿಸುತ್ತೇವೆ ಎಂದು ಹೇಳಲಾಗದು. ಆದರೆ, ಕೆಲವು ವಿಚಾರಗಳ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...