alex Certify ಶಾಸಕನ ಬೆಂಬಲಿಗನಿಂದ ಹಾಡಹಗಲೇ ಗೂಂಡಾಗಿರಿ; ವಿಡಿಯೋ ಹಂಚಿಕೊಂಡ ಉದ್ಧವ್ ಠಾಕ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕನ ಬೆಂಬಲಿಗನಿಂದ ಹಾಡಹಗಲೇ ಗೂಂಡಾಗಿರಿ; ವಿಡಿಯೋ ಹಂಚಿಕೊಂಡ ಉದ್ಧವ್ ಠಾಕ್ರೆ

ಮಹಾರಾಷ್ಟ್ರ – ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ಕಳೆದ ಕೆಲವು ದಿನಗಳಿಂದ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಈ ನಡುವೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕ ಮಹೇಂದ್ರ ಥೋರ್ವ್ ಅವರ ಅಂಗರಕ್ಷಕ ವ್ಯಕ್ತಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸುತ್ತಿರುವ ಘಟನೆ ನಡೆದಿದೆ. ಈ ವಿಡಿಯೋ ಹಂಚಿಕೊಡಿರುವ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬಣ ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದೆ.

ಶಾಸಕ ಮಹೇಂದ್ರ ಥೋರ್ವ್ ಅವರ ಅಂಗರಕ್ಷಕ ನೇರಲ್‌ನಲ್ಲಿ ಹಗಲು ಹೊತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದ ವೀಡಿಯೊವನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, “ಮಹಾರಾಷ್ಟ್ರದಲ್ಲಿ ದರೋಡೆಕೋರರು! ಶಾಸಕ ಮಹೇಂದ್ರ ಥೋರ್ವೆ ಅವರ ಅಂಗರಕ್ಷಕ ಶಿವ ಎಂಬಾತ ನೇರಲ್‌ನಲ್ಲಿ ಹಗಲುವೇಳೆಯೇ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದನು. ಆ ವ್ಯಕ್ತಿಯ ಹೆಂಡತಿ ಮತ್ತು ಮಕ್ಕಳು ಅಳುತ್ತಿದ್ದರು. ಆದರೆ ಸಹಾಯಕ್ಕೆ ಬರಲು ಯಾರೂ ಧೈರ್ಯ ಮಾಡಲಿಲ್ಲ… ಕಾನೂನು ಸುವ್ಯವಸ್ಥೆ ಬೂದಿಯಾಗಿದೆ. ರಾಜ್ಯಾದ್ಯಂತ ಗೂಂಡಾಗಿರಿ ಹೆಚ್ಚಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗಾಗಿ ಕಾಯಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ಈ ಘಟನೆಯ ಬಗ್ಗೆ ಸರ್ಕಾರ ಅಥವಾ ಪೊಲೀಸರಿಂದ ಇದುವರೆಗೆ ಯಾರೂ ಪ್ರತಿಕ್ರಿಯೆ ನೀಡಿಲ್ಲ.
ವೀಡಿಯೊದಲ್ಲಿ, ಶಿವಸೇನೆ (ಯುಬಿಟಿ) ಮುಖಂಡ ಕಾರ್ ಡ್ರೈವರ್‌ಗೆ ರಾಡ್‌ನಿಂದ ಹೊಡೆಯುತ್ತಿದ್ದಾರೆ. ಹಗಲು ಹೊತ್ತಿನಲ್ಲಿ ರಸ್ತೆ ಮಧ್ಯದಲ್ಲಿ ಈ ಘಟನೆ ನಡೆದಿದೆ. ಮಹಿಳೆ ಸಹಾಯಕ್ಕಾಗಿ ಅಳುವುದನ್ನು ಸಹ ಕೇಳಬಹುದು.

— ShivSena – शिवसेना Uddhav Balasaheb Thackeray (@ShivSenaUBT_) September 11, 2024

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...