alex Certify ಈ ಸಮಾಜದಲ್ಲಿ ನಮ್ಮ ಹೆಣ್ಣುಮಕ್ಕಳು ಎಷ್ಟು ಸುರಕ್ಷಿತ…? ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಮಹೇಶ್​ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಮಾಜದಲ್ಲಿ ನಮ್ಮ ಹೆಣ್ಣುಮಕ್ಕಳು ಎಷ್ಟು ಸುರಕ್ಷಿತ…? ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಮಹೇಶ್​ಬಾಬು

ಸೆಪ್ಟೆಂಬರ್​ 9ರಂದು ತೆಲಂಗಾಣದ ಸೈದಾಬಾದ್​​ನಲ್ಲಿ ನಡೆದ ಆರು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ತೆಲುಗು ಸೂಪರ್​ಸ್ಟಾರ್​ ಮಹೇಶ್​ ಬಾಬು ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣವು ನಮ್ಮ ಸಮಾಜ ಎಷ್ಟು ಕುಸಿದಿದೆ ಅನ್ನೋದನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

28 ಮಿಲಿಯನ್ ವೀಕ್ಷಣೆ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್

ನಮ್ಮ ಹೆಣ್ಣು ಮಕ್ಕಳು ಸುರಕ್ಷಿತವಾಗಿದ್ದಾರೆಯೇ..? ಈ ಪ್ರಶ್ನೆಯೂ ಎಂದಿಗೂ ನನ್ನನ್ನು ಕಾಡಲಿದೆ. ಕರುಳು ಹಿಂಡಿದಂತೆ ಆಗುತ್ತದೆ. ಆ ಕುಟುಂಬದ ಸ್ಥಿತಿ ಹೇಗಿರಬಹುದು ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಮಹೇಶ್​ ಬಾಬು ಟ್ವೀಟಾಯಿಸಿದ್ದಾರೆ. ಮತ್ತೊಂದು ಟ್ವೀಟ್​ನಲ್ಲಿ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್​ 9ರಂದು 6 ವರ್ಷದ ಬಾಲಕಿಯ ಮೇಲೆ ನೆರೆಮನೆಯ ಪಲ್ಲಕೊಂಡ ರಾಜು ಅತ್ಯಾಚಾರ ನಡೆಸಿ ಕೊಲೆಗೈದಿದ್ದ. ಆರೋಪಿಯ ಪತ್ತೆಗೆ ಲುಕ್​ಔಟ್​ ನೋಟಿಸ್​ ಜಾರಿ ಮಾಡಿರುವ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಘೋಷಣೆ ಮಾಡಿದ್ದಾರೆ.

ಆರು ವರ್ಷದ ಬಾಲಕಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯ ತಂದೆ ಆಟೋ ಚಾಲಕ ಸಾಕಷ್ಟು ಹುಡುಕಾಟ ನಡೆಸಿದ್ದರು. ಬಳಿಕ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿತ್ತು. ಕೊನೆಗೆ ಬಾಲಕಿಯ ಮೃತದೇಹ ನೆರೆಮನೆಯಲ್ಲಿ ಪತ್ತೆಯಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...