alex Certify ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಎತ್ತಂಗಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಎತ್ತಂಗಡಿ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

ರಾಜೇಶ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಸ್ಥೆ ಸಾಮರಸ್ಯದ ಹೊಣೆ ವಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನವರಾದ ರಾಜೇಶ್ ಅವರು ಆರ್.ಎಸ್.ಎಸ್. ಪ್ರಚಾರಕರಾಗಿ ಅನೇಕ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

2022ರ ಜುಲೈನಲ್ಲಿ ಅವರನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಮಹತ್ವದ ಹುದ್ದೆಗೆ ಬಂದವರ ಅವಧಿ ಸಾಮಾನ್ಯವಾಗಿ ಮೂರು ವರ್ಷ ಇರುತ್ತದೆ. ಆದರೆ ಅವಧಿಗೆ ಮೊದಲೇ ಅವರನ್ನು ಬದಲಾವಣೆ ಮಾಡಲಾಗಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಮೊದಲೇ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಬಿಜೆಪಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆ ಮಹತ್ವದ್ದಾಗಿದೆ. ಪಕ್ಷ ಮತ್ತು ಆರ್.ಎಸ್.ಎಸ್. ನಡುವೆ ಸಮನ್ವಯ ಸಾಧಿಸುವಲ್ಲಿ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುವವರು ಕಾರ್ಯಪ್ರವೃತ್ತರಾಗಿರುತ್ತಾರೆ. ಇತ್ತೀಚೆಗೆ ನಡೆದ ಪಕ್ಷದಲ್ಲಿನ ಬೆಳವಣಿಗೆ ಹಿನ್ನಲೆಯಲ್ಲಿ ರಾಜೇಶ್ ಅವರನ್ನು ಕೈಬಿಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...