alex Certify ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ.

ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು ಭೇಟಿ ಮಾಡಬೇಕೆಂದುಕೊಂಡಿದ್ದೆ. ದೇವೇಗೌಡರ ಅನಾರೋಗ್ಯದ ಬಗ್ಗೆ ಪುತ್ರ ಕುಮಾರಸ್ವಾಮಿ ಹೇಳಿದ್ದರು ಎಂದು ದೇವೇಗೌಡರ ಭೇಟಿಯ ನಂತರ ಯಡಿಯೂರಪ್ಪ ಹೇಳಿದ್ದಾರೆ.

ನಿನ್ನೆಯಷ್ಟೇ ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ನಾಯಕರು ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...