alex Certify ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ರಾಜ್ಯದ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವುದು ನಮ್ಮ ರಾಜ್ಯದ ದುರಾದೃಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಸಂಪುಟ ರಚನೆ ವಿಳಂಬ ಮಾಡಲಾಗಿತ್ತು. ರಾಜ್ಯ ಬಿಜೆಪಿಯಲ್ಲಿ ಈಗಲೂ ಅದೇ ರೀತಿಯ ಪರಿಸ್ಥಿತಿ ಇದೆ. ಸಂಪುಟ ರಚನೆ ಮಾಡುವುದು ಕೂಡ ಮುಖ್ಯಮಂತ್ರಿಗೆ ಸವಾಲಾಗಲಿದೆ. ಆದಷ್ಟು, ಬೇಗನೆ ಸಿಎಂ ಬೊಮ್ಮಾಯಿ ಅವರು ಸಂಪುಟ ರಚಿಸಬೇಕು. ಸಂಪುಟ ರಚನೆಗೆ ಪಕ್ಷದ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಬೇಕು. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಆದಷ್ಟು ಬೇಗನೆ ಸಚಿವ ಸಂಪುಟ ರಚಿಸಬೇಕಿದೆ. ಇದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಮನ ಕೊಡಲಿ ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾಂಪೋ, ಐರನ್ ಸ್ಟಾಂಪೋ ಎಂಬುದನ್ನು ಜನರು ತೀರ್ಮಾನಿಸುತ್ತಾರೆ. ರಾಜ್ಯದ ಜನರ ಸಂಕಷ್ಟಕ್ಕೆ ಮೊದಲು ಸ್ಪಂದಿಸಬೇಕು ಎಂದು ಹೆಚ್.ಡಿ.ಕೆ. ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...