alex Certify BIG NEWS: ಮೈತ್ರಿ ಬೆನ್ನಲ್ಲೇ ಭಿನ್ನಮತ ಸ್ಫೋಟ; ಅಸಮಾಧಾನಿತರ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈತ್ರಿ ಬೆನ್ನಲ್ಲೇ ಭಿನ್ನಮತ ಸ್ಫೋಟ; ಅಸಮಾಧಾನಿತರ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ


ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ನ ಹಲವು ಶಾಸಕರು, ಮಾಜಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಮುಖಂಡರು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಶಾಸಕರು, ಮುಂದಿನ ನಡೆ ಬಗ್ಗೆ ಬೆಂಬಲಿಗರೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಅಸಮಾಧಾನಿತರ ಸಮಾಧಾನಕ್ಕೆ ಯತ್ನಿಸಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಜೆಡಿಎಸ್ ಅಸಮಾಧಾನಿತರ ಸಭೆ ಕರೆದಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಬಿಡದಿಯ ತೋಟದ ಮನೆಯಲ್ಲಿ ಜೆಡಿಎಸ್ ಸಭೆ ಕರೆಯಲಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರು, ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ಚರ್ಚಿಸಿ, ಎಲ್ಲರ ಮನವೊಲಿಕೆಗೆ ಪ್ರಯತ್ನಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich