alex Certify BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಳೆಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲವಿದೆ ಎಂದು ನಾನು ಹೇಳಿದ್ದು ವ್ಯಂಗ್ಯವಾಗಿ. ಪ್ರತಿ ದಿನ ನೀವು ಬನ್ನಿ, ನೀವು ಬನ್ನಿ ಅಂತಾ ಎಲ್ಲರನ್ನೂ ಕರೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಕನಿಷ್ಠ 50 ಜನರನ್ನಾದರೂ ಕರೆ ತನ್ನಿ ಎಂದು ಕರೆ ನೀಡಿದ್ದಾರೆ. ಇನ್ನೂ ಮುಂದೆ ಯಾಕೆ ಹೋಗ್ತೀರಾ? ಒಳ್ಳೆಯ ಕೆಲಸ ಮಾಡುತ್ತೇನೆ ಎಂದರೆ ಎಲ್ಲರನ್ನೂ ಕಳಿಸುತ್ತೇನೆ ಎಂದು ಹೇಳಿದ್ದೇನೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರಾ ಇಲ್ಲವಾ ಎಂಬುದನ್ನು ಕಾಂಗ್ರೆಸ್ ನವರು ಹೇಳಬೇಕು. ಲೋಕಸಭಾ ಚುನಾವಣೆ ಬಳಿಕ ಈ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಎಂಬುದನ್ನು ಯೋಚನೆ ಮಾಡಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...