alex Certify ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದ ಹೆಚ್.ಡಿ.ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದ ಹೆಚ್.ಡಿ.ರೇವಣ್ಣ

ಮೈಸೂರು: ನಮಗೆ ಸದ್ಯದಮಟ್ಟಿಗೆ ದೇವರೇ ಗತಿ…..ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಶಾಸಕ ಹೆಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನಗೆ ದೇವರು ಹಾಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನಮಗೆ ನ್ಯಾಯ ಸಿಗಲಿದೆ ಎಂದರು.

ಇನ್ನು ಮಗ ಪ್ರಜ್ವಲ್ ನನ್ನು ನೋಡಲು ಜೈಲಿಗೆ ಹೋಗುವುದಿಲ್ಲ. ಒಂದುವೇಳೆ ಹೋದರೆ ಏನೋ ಹೇಳಿಕೊಡಲು ಹೋಗಿದ್ದಾನೆ ಎನ್ನುತ್ತಾರೆ. ನಮ್ಮ ಕುಟುಂಬದ ವಿರುದ್ಧ ಹಾಕಿರುವ ಕೇಸ್ ಗಳು ತನಿಖಾ ಹಂತದಲ್ಲಿ ಹಾಗಾಗಿ ಈ ಬಗ್ಗೆ ಏನೂ ಮಾತನಾಡಲ್ಲ ಎಂದರು.

ಇದೇ ವೇಳೆ ಭವಾನಿ ರೇವಣ್ಣ ಮಗನನ್ನು ನೋಡಲು ಹೋಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರೇವಣ್ಣ, ತಾಯಿಯಾಗಿ ಮಗನನ್ನು ನೋಡಲು ಹೋಗಿರುತ್ತಾರೆ. ಅವರು ಏನು ಮಾತನಾಡಿದ್ದಾರೆ ಎಂಬುದೂ ನನಗೆ ಗೊತ್ತಿಲ್ಲ. ಹಾಗಂತ ನಾನು ಪ್ರಜ್ವಲ್ ಭೇಟಿಗೆ ಈಗ ಹೋಗಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...