alex Certify ಪೊಲೀಸರು ಸರ್ಕಾರದ ಕೈಗೊಂಬೆಯಂತಾಗಿದ್ದಾರೆ; ಗ್ಯಾಂಗ್ ರೇಪ್ ಕೇಸ್ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿ; ಬಿ.ವೈ.ವಿಜಯೇಂದ್ರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರು ಸರ್ಕಾರದ ಕೈಗೊಂಬೆಯಂತಾಗಿದ್ದಾರೆ; ಗ್ಯಾಂಗ್ ರೇಪ್ ಕೇಸ್ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿ; ಬಿ.ವೈ.ವಿಜಯೇಂದ್ರ ಆರೋಪ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸರು ರಾಜ್ಯ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವ ಕೆಲಸದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಿಡಿಕಾರಿದರು.

ನೀಚ ಘಟನೆ ನಡೆದಿದೆ. ಈ ವಿಚಾರದಲ್ಲಿಯೂ ರಾಜಕೀಯ ಮಡಬಾರದು. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಎಂದರೆ ಈ ಸರ್ಕಾರ ಯಾಕೆ ಬೇಕು? ಎಂದು ಪ್ರಸ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...