alex Certify ‘ಇಂದಿನಿಂದ ಹೊಸ ಅಧ್ಯಾಯ, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಸೇವೆಗಾಗಿ ಕೆಲಸ ಮಾಡುತ್ತೇನೆ’ ಬಿಜೆಪಿ ಸೇರ್ಪಡೆಗೆ ಮೊದಲು ಹಾರ್ದಿಕ್ ಪಟೇಲ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಇಂದಿನಿಂದ ಹೊಸ ಅಧ್ಯಾಯ, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಸೇವೆಗಾಗಿ ಕೆಲಸ ಮಾಡುತ್ತೇನೆ’ ಬಿಜೆಪಿ ಸೇರ್ಪಡೆಗೆ ಮೊದಲು ಹಾರ್ದಿಕ್ ಪಟೇಲ್ ಹೇಳಿಕೆ

ನವದೆಹಲಿ: ಗುಜರಾತ್ ಯುವ ನಾಯಕ ಹಾರ್ದಿಕ್ ಪಟೇಲ್ ಇಂದು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ಅಸೆಂಬ್ಲಿ ಚುನಾವಣೆಗೆ ಮುನ್ನವೇ ಕೇಸರಿ ಪಕ್ಷಕ್ಕೆ ಸೇರುತ್ತಿರುವ ಅವರು ಇಂದಿನಿಂದ ಹೊಸ ಅಧ್ಯಾಯ ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಕಲ್ಯಾಣಕ್ಕಾಗಿ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸೇರುವ ಮುನ್ನ ಹಾರ್ದಿಕ್ ಪಟೇಲ್ ಕೂಡ ಇಂದು ಬೆಳಗ್ಗೆ ಅಹಮದಾಬಾದ್‌ ನಲ್ಲಿರುವ ತಮ್ಮ ನಿವಾಸದಲ್ಲಿ ‘ಪೂಜೆ’ ನೆರವೇರಿಸಿದರು. ಈ ಮಧ್ಯೆ, ಗುಜರಾತ್‌ನ ಗಾಂಧಿನಗರದಲ್ಲಿರುವ ಪಕ್ಷದ ಕಚೇರಿಯ ಹೊರಗೆ ಹಾರ್ದಿಕ್ ಪಟೇಲ್ ಅವರನ್ನು ಬಿಜೆಪಿಗೆ ಸ್ವಾಗತಿಸುವ ಪೋಸ್ಟರ್‌ ಗಳು ಕಂಡುಬಂದಿವೆ.

2019ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು ನಂತರ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿದ್ದ ಪಟೇಲ್ ಈ ತಿಂಗಳ ಆರಂಭದಲ್ಲಿ ಪಕ್ಷ ತೊರೆದಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...