alex Certify ಕಾವೇರಿ ಕಿಚ್ಚು : ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ- ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ಕಿಚ್ಚು : ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ- ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು : ಕಾವೇರಿ ಹೋರಾಟಗಾರರಿಗೆ ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದು, ಕಾನೂನು ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಬಂದ್ ಬೇಕಿದ್ದರೆ ಶಾಂತಿಯುತವಾಗಿ ಮಾಡಿಕೊಳ್ಳಿ, ಒಂದು ವೇಳೆ ಗಲಾಟೆ, ಗಲಭೆಗಳಾದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಈ ಸಂಬಂಧ ನಾವು ತಯಾರಿ ಮಾಡಿಕೊಂಡಿದ್ದೇವೆ, ಪೊಲೀಸರು ಕೂಡ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದಾರೆ. ಒಂದು ವೇಳೆ ಕಾನೂನು ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಸೆ.26 ರಂದು ಬೆಂಗಳೂರು ಬಂದ್ ಹಾಗೂ ಸೆ.29 ರಂದು ಕರ್ನಾಟಕ ಬಂದ್ ನಡೆಯುವ ಸಾಧ್ಯತೆಯಿದೆ. ಕಾವೇರಿ ನೀರಿಗಾಗಿ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸಲು ಉತ್ತಮ ಎಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...