alex Certify ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ

ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್‍.ಕೆ. ಮಹೇಶ್ ಅವರಿಗೆ ಸೀಟು ಸಿಕ್ಕಿಲ್ಲವೆಂದು ಬೆಂಬಲಿಗರು ಗದ್ದಲ ಮಾಡಿದ್ದಾರೆ.

ಕಾರ್ಯಕರ್ತರ ವರ್ತನೆಗೆ ಸಚಿವ ಚಲುವರಾಯ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗೆಲ್ಲಾ ಗಲಾಟೆ ಮಾಡಿದರೆ ನಾನು ಹೊರಟು ಹೋಗುತ್ತೇನೆ. 40 ವರ್ಷದಲ್ಲಿ ಈ ರೀತಿಯ ಸಭೆ ನೋಡಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಸರಿ ಮಾಡಿಕೊಂಡು ಹೋಗೋಣ. ಗಲಾಟೆ ಮಾಡಬೇಡಿ, ಹೇಳುವುದನ್ನು ಸಮಾಧಾನದಿಂದ ಕೇಳಿಸಿಕೊಳ್ಳಿ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...