alex Certify ಜೆಡಿಎಸ್ ವಿರುದ್ಧ ಗುಡುಗಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ವಿರುದ್ಧ ಗುಡುಗಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಚಂದ್ರೇಗೌಡ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಪ್ರತಿಕ್ರಿಯೆ ನೀಡಿದ್ದು, 10 ತಿಂಗಳ ನಂತರ ಅಧಿಕಾರ ಬಿಟ್ಟು ಕೊಡಲಿಲ್ಲ ಎಂದರೆ ನಗರಸಭೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಇದೇ ಅಧಿಕಾರ ಕೊನೆಯ ಆಗುತ್ತದೆ ಎಂದು ಗುಡುಗಿದ್ದಾರೆ.

ಜೆಡಿಎಸ್ 10 ತಿಂಗಳ ನಂತರ ಅಧಿಕಾರ ಬಿಟ್ಟುಕೊಡದಿದ್ದರೆ ಇನ್ನು ಮುಂದೆ ಹಾಸನ ನಗರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ. ಬಿಜೆಪಿ ಸದಸ್ಯನಿಗೆ ಅಧಿಕಾರ ಸಿಗುವಂತೆ ಮಾಡುತ್ತೇನೆ ಎಂದು ಹಾಸನದಲ್ಲಿ ಪ್ರೀತಂ ಗೌಡ ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ವಿರುದ್ಧ ಗುಡುಗಿದ ಪ್ರೀತಂ ಗೌಡ, ಹಾಸನ ನಗರಸಭೆಯಲ್ಲಿ ಜೆಡಿಎಸ್ ಅಧಿಕಾರ ಬಿಟ್ಟುಕೊಡದಿದ್ದರೆ ಹಾಸನ ನಗರಸಭೆಯಲ್ಲಿ ಇನ್ನು ಮುಂದೆ ಬಿಜೆಪಿ ಅಧಿಕಾರದಲ್ಲಿರುತ್ತದೆ. ಪ್ರೀತಂ ಗೌಡರಿಗೆ ಹಿನ್ನಡೆಯಾದರೇನೆ ಮುಂದೆ ಮುನ್ನಡೆ ಆಗೋದು. ಬ್ಯಾಕ್ ಸ್ಟೆಪ್ ಇಟ್ಟರೆ ಸಿಕ್ಸ್ ಹೊಡೆಯುವುದಕ್ಕೆ ಸಾಧ್ಯ. ನಾನು ಮೈತ್ರಿ ವಿರುದ್ಧ ಮಾತನಾಡುತ್ತಿಲ್ಲ. ಜೆಡಿಎಸ್ ಪಕ್ಷದ ಧೋರಣೆಯ ವಿರುದ್ಧ ಮಾತನಾಡಿದ್ದೇನೆ. ಮೈತ್ರಿ ಧರ್ಮ ಪಾಲಿಸುವುದು ಎರಡು ಪಕ್ಷಗಳ ಜವಾಬ್ದಾರಿ ಆಗಿರುತ್ತದೆ. ಮೈತ್ರಿ ಧರ್ಮಕ್ಕೆ ಚ್ಯುತಿ ಬಾರದಂತೆ ನಡೆಯಬೇಕೆಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...