alex Certify SHOCKING NEWS: ಬೆಳಗಾವಿ ಬಳಿಕ ಹಾವೇರಿಯಲ್ಲಿಯೂ ಅಮಾನುಷ ಕೃತ್ಯ; ಪೊಲೀಸ್ ಠಾಣೆ ಎದುರೇ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಬೆಳಗಾವಿ ಬಳಿಕ ಹಾವೇರಿಯಲ್ಲಿಯೂ ಅಮಾನುಷ ಕೃತ್ಯ; ಪೊಲೀಸ್ ಠಾಣೆ ಎದುರೇ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಹಾವೇರಿ: ಕೆಲ ದಿನಗಳ ಹಿಂದೆ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಬಗ್ಗೆ ತನಿಖೆ ನಡೆದಿರುವಾಗಲೇ ಇಂತದ್ದೇ ಅಮಾನುಷ ಘಟನೆ ಈಗ ಹಾವೇರಿಯಲ್ಲಿ ನಡೆದಿದೆ. ಯುವಕ-ಯುವತಿ ಪ್ರೀತಿಸಿ ಓಡಿ ಹೋದರೆಂದು ಯುವಕನ ಮಾವನನ್ನು ಅರೆಬೆತ್ತಲೆ ಮಾಡಿ ಥಳಿಸಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುದೇನೂರು ಗ್ರಾಮದ ಯುವಕ ಚಳಗೇರಿ ಗ್ರಾಮದ ಯುವತಿಯನ್ನು ಪ್ರೀತಿಸಿ ಇಬ್ಬರೂ ಓಡಿ ಹೋದ ಕಾರಣಕ್ಕೆ ಯುವತಿ ಮನೆಯವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಾರೆ.

ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಅಪಹರಿಸಿ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ಎದುರೇ ಯುವತಿ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಕುಟುಂಬದವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...