alex Certify ಮುಖ್ಯಮಂತ್ರಿಯಾಗಲಿ ಹೆಚ್.ಡಿ. ಕುಮಾರಸ್ವಾಮಿ: ಬಿಜೆಪಿ ಶಾಸಕ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿಯಾಗಲಿ ಹೆಚ್.ಡಿ. ಕುಮಾರಸ್ವಾಮಿ: ಬಿಜೆಪಿ ಶಾಸಕ ಬ್ಯಾಟಿಂಗ್

ತುಮಕೂರು: ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ. ಕುಮಾರಸ್ವಾಮಿ ಪರವಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಂ. ಚಿದಾನಂದ ಗೌಡ ಬ್ಯಾಟಿಂಗ್ ಮಾಡಿದ್ದಾರೆ.

ನಿನ್ನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕುಂಚಿಟಿಗ ಒಕ್ಕಲಿಗರ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಎಂ. ಚಿದಾನಂದ ಗೌಡ, ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆದರೆ ಮೊದಲು ಖುಷಿಪಡುವುದು ನಾನೇ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಮತ್ತು ಶ್ರೀ ನಂಜಾವಧೂತ ಸ್ವಾಮೀಜಿಗಳ ಸಮ್ಮುಖದಲ್ಲಿ ಅವರು ಈ ರೀತಿ ಹೇಳಿದ್ದಾರೆ. ಬಿಜೆಪಿ ಶಾಸಕ ಕುಮಾರಸ್ವಾಮಿ ಪರವಾಗಿ ಬ್ಯಾಟಿಂಗ್ ಮಾಡಿರುವುದು ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...