alex Certify ತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ.

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್ ಪ್ರವಾಸ ಮುಗಿಸಿ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಸಿಂಗಾಪೂರದಲ್ಲಿ ಷಡ್ಯಂತ್ರ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಯುರೋಪ್ ಪ್ರವಾಸಕ್ಕೆ ತೆರಳಿದ್ದನ್ನು ಸಿಂಗಾಪುರಕ್ಕೆ ಹೋಗಿದ್ದೆ. ಅಲ್ಲಿ ಸರ್ಕಾರ ಕೆಡವಲು ಷಡ್ಯಂತ್ರ ನಡೆಸಿದ್ದೆ ಎಂದು ಹೇಳುತ್ತಾರೆ. ನಾನು ಕುಟುಂಬದವರೊಂದಿಗೆ ಯುರೋಪ್ ಪ್ರವಾಸಕ್ಕೆ ಹೋಗಿದ್ದೆ. ಅವರಿಗೆ ನನ್ನ ಬಗ್ಗೆ ಇನ್ನೂ ಭಯ, ಆತಂಕವಿದೆ ಎಂಬುದನ್ನು ಕಾಣಬಹುದು. ಅವರು ಕುತಂತ್ರ ಮಾಡುತ್ತಾರೆ. ಕೃತಕವಾದ ಶಕ್ತಿ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಅದು ಬಹಳ ದಿನ ಇರುವುದಿಲ್ಲ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.

ಗುತ್ತಿಗೆದಾರರಿಗೆ ದುಡ್ಡು ಇದ್ದರೆ ಒಳಗೆ ಬನ್ನಿ ಎನ್ನುತ್ತಾರೆ. ಇವರಿಂದ ಪಾರದರ್ಶಕ ಆಡಳಿತ ಸಾಧ್ಯವೇ? ಭ್ರಷ್ಟಾಚಾರ ನಿಲ್ಲಿಸಿ ಪಾರದರ್ಶಕ ಆಡಳಿತ ನೀಡುತ್ತಾರೆಯೇ? ಈಸ್ಟ್ ಇಂಡಿಯಾ ಕಂಪನಿ ಭಾರತ ಬಿಟ್ಟು ಹೋಗಿದೆ. ಬ್ರಿಟೀಷರ ವಸೂಲಿ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಗೆ ಹೋಗಿ ರಾಹುಲ್ ಗಾಂಧಿ ಅವರ ಎದುರು ಪಾರದರ್ಶಕ ಆಡಳಿತದ ಬಗ್ಗೆ ಹೇಳುತ್ತಾರೆ. ಇಲ್ಲಿ ಚೇಲಾಗಳನ್ನು ಇಟ್ಟುಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಗುತ್ತಿಗೆದಾರರಿಂದ ಪರ್ಸೆಂಟೇಜ್ ಪಡೆಯಲು ಮುಂದಾಗಿದ್ದಾರೆ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...