alex Certify BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜೀವ ಬೆದರಿಕೆ ಆರೋಪದಡಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಉದ್ಯಮಿ ವಿಜಯ್ ತಾತಾ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ಕುಮಾರಸ್ವಾಮಿ ಅವರೊಂದಿಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ರಮೇಶಗೌಡ ವಿರುದ್ಧವು ಎಫ್ಐಆರ್ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ್ದಾರೆ ಎಂದು ವಿಜಯ್ ತಾತಾ ದೂರು ನೀಡಿದ್ದರು. ಬಿಎನ್ಎಸ್ ಯು/ಎಸ್(5), 308, (2)351(2) ಅಡಿಯಲ್ಲಿ ಕೇಸ್ ದಾಖಲಾಗಿದೆ.

50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ಎಂಬುವವರು ದೂರು ನೀಡಿದ್ದರು. 2019 ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತಕ್ಷಣಕ್ಕೆ 50 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದರು. ಹಣ ಕೊಡಲು ನಿರಾಕರಿಸಿದ ಹಿನ್ನೆಲೆ ನನ್ನ ಉದ್ಯಮ ಹಾಗೂ ನನ್ನ ಜೀವಕ್ಕೆ ಸಂಚಕಾರ ತರುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು. ಬಳಿಕ ಎಫ್ಐಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...