alex Certify ಅಧಿಕಾರ ಹಿಡಿಯಲು ಜೆಡಿಎಸ್ ಮಹತ್ವದ ಕ್ರಮ: ಸಂಘಟನೆಗೆ ಚುರುಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರ ಹಿಡಿಯಲು ಜೆಡಿಎಸ್ ಮಹತ್ವದ ಕ್ರಮ: ಸಂಘಟನೆಗೆ ಚುರುಕು

ರಾಮನಗರ: ಸೆಪ್ಟೆಂಬರ್ 27 ರಿಂದ 4 ದಿನಗಳ ಕಾಲ ಜೆಡಿಎಸ್ ಪಕ್ಷದ ವತಿಯಿಂದ ಕಾರ್ಯಾಗಾರ ನಡೆಸಲಾಗುವುದು.

ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಮೊದಲ ಎರಡು  ದಿನ ಶಾಸಕ ಸ್ಥಾನದ ಆಕಾಂಕ್ಷಿಗಳು, ಜೆಡಿಎಸ್ ಶಾಸಕರಿಗೆ ಕಾರ್ಯಾಗಾರ ನಡೆಯಲಿದೆ. ಮೂರನೇ ದಿನ ಮಹಿಳೆಯರಿಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು, ಬೂತ್ ಮಟ್ಟದಲ್ಲಿ ಮಹಿಳಾ ಸಂಘಟನೆಯ ಕುರಿತಂತೆ ಜವಾಬ್ದಾರಿ ಕುರಿತು ಕಾರ್ಯಾಗಾರ ನಡೆಸಲಾಗುವುದು ಎಂದು ಹೇಳಿದ್ದಾರೆ.

ಪಕ್ಷದ ವರಿಷ್ಠರಾದ ದೇವೇಗೌಡರು ಪಕ್ಷ ಸಂಘಟನೆ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. 7 ಸೆಷನ್ ನಲ್ಲಿ ಕಾರ್ಯಾಗಾರ ನಡೆಯಲಿದ್ದು, ಯಾವುದೇ ಪಕ್ಷದೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಅಧಿಕಾರ ಪಡೆಯುವುದು ನಮ್ಮ ಪಕ್ಷದ ಗುರಿಯಾಗಿದೆ ಎಂದು ಹೆಚ್.ಡಿ.ಕೆ. ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...