alex Certify BREAKING NEWS: 20 ಶಾಸಕರೊಂದಿಗೆ ಹೈದರಾಬಾದ್ ಗೆ ತೆರಳಿದ ಮಾಜಿ ಸಿಎಂ HDK; KCR ಹೊಸ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 20 ಶಾಸಕರೊಂದಿಗೆ ಹೈದರಾಬಾದ್ ಗೆ ತೆರಳಿದ ಮಾಜಿ ಸಿಎಂ HDK; KCR ಹೊಸ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 20 ಶಾಸಕರ ಜತೆ ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ವಿಶೇಷ ವಿಮಾನದಲ್ಲಿ ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ ಅವರು ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನೂತನ ಪಕ್ಷ ಸ್ಥಾಪನೆ ಘೋಷಣೆ ಮಾಡಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕೆಸಿಆರ್ ಭಾರತ ರಾಷ್ಟ್ರ ಸಮಿತಿ(BRS) ಪಕ್ಷ ಸ್ಥಾಪನೆ ಮಾಡಲಿದ್ದು, ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆ ಚರ್ಚೆ ನಡೆಸಿದ್ದರು.

ಕೆಲ ತಿಂಗಳ ಹಿಂದೆಯಷ್ಟೇ ಹೈದ್ರಾಬಾದ್ ಗೆ ತೆರಳಿ ಕೆಸಿಆರ್ ಜತೆ ಚರ್ಚೆ ನಡೆಸಿದ್ದ ಹೆಚ್.ಡಿ.ಕೆ. ಇಂದು ಹೈದ್ರಾಬಾದ್ ನಲ್ಲೇ ಶಾಸಕರ ಜತೆ ವಾಸ್ತವ್ಯ ಹೂಡಲಿರುವ ಹೆಚ್.ಡಿ. ಕುಮಾರಸ್ವಾಮಿ ನಾಳೆ ಹೊಸ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...