alex Certify ‘ಪುಟಗೋಸಿ’ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಸಿದ್ದರಾಮಯ್ಯ 23 ಶಾಸಕರ ಹೊಟ್ಟೆ ಮೇಲೆ ಹೊಡೆದಿದ್ರು: ಮಾಜಿ ಸಿಎಂ ಹೆಚ್​.ಡಿ.ಕೆ. ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಟಗೋಸಿ’ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಸಿದ್ದರಾಮಯ್ಯ 23 ಶಾಸಕರ ಹೊಟ್ಟೆ ಮೇಲೆ ಹೊಡೆದಿದ್ರು: ಮಾಜಿ ಸಿಎಂ ಹೆಚ್​.ಡಿ.ಕೆ. ಗಂಭೀರ ಆರೋಪ

ನಾನು ಸುಮ್ಮನೇ ಇದ್ದರೂ ಕುಮಾರಸ್ವಾಮಿ ಕಾಲು ಕೆರೆದು ಜಗಳಕ್ಕೆ ಬರ್ತಾನೆ. ನಾನಿನ್ನು ಹೆಚ್.​ಡಿ.ಕೆ. ಮಾತನ್ನು ನೆಗ್ಲೆಕ್ಟ್​ ಮಾಡುತ್ತೇನೆ ಎಂದು ಕೆಲ ದಿನಗಳ ಹಿಂದಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ಆದರೆ ಇದಾದ ಬಳಿಕವೂ ಸುಮ್ಮನಾಗದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಹೆಚ್​.ಡಿ. ಕುಮಾರಸ್ವಾಮಿ, ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡುವಲ್ಲಿ ಸಿದ್ದರಾಮಯ್ಯ ಪಾತ್ರ ಏನಿತ್ತು ಎಂಬುದು ನನಗೆ ತಿಳಿದಿದೆ. ಕಾಂಗ್ರೆಸ್​ನ 23 ಮಂತ್ರಿಗಳನ್ನು ಮನೆಗೆ ಕಳುಹಿಸಿ ಅವರ ಹೊಟ್ಟೆಯ ಮೇಲೆ ಹೊಡೆದಿದ್ದರು. ವಿರೋಧ ಪಕ್ಷ ನಾಯಕನ ಸ್ಥಾನವನ್ನು ಪಡೆಯಲಿಕ್ಕೋಸ್ಕರ ಸಮ್ಮಿಶ್ರ ಸರ್ಕಾರವನ್ನು ಕೆಡವಿದ ಸಿದ್ದರಾಮಯ್ಯರಿಗೆ ನಾಚಿಕೆ ಆಗಬೇಕು ಎಂದು ಜರಿದಿದ್ದಾರೆ.

ಬಿಜೆಪಿ, ಜೆಡಿಎಸ್​ನವರು ಅಲ್ಪಸಂಖ್ಯಾತರಿಗೆ ಟಿಕೆಟ್​ ನೀಡೋದು ಕಾಂಗ್ರೆಸ್​ನ್ನು ಉರಿಸೋಕೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಆದರೆ ಇಂದು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಅಂದರೆ ಅದಕ್ಕೆ ಸಿದ್ದರಾಮಯ್ಯರೇ ಕಾರಣ. ಅಲ್ಪಸಂಖ್ಯಾತರು ಇದನ್ನೆಲ್ಲ ಅರ್ಥ ಮಾಡಿಕೊಳ್ತಾರೆ. ನೀವು ಅಲ್ಪಸಂಖ್ಯಾತರನ್ನು ಗುತ್ತಿಗೆ ತೆಗೆದುಕೊಂಡವರಂತೆ ಆಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...