alex Certify ಪಂಚರತ್ನ ರಥಯಾತ್ರೆಯೊಂದಿಗೆ ಆಗಮಿಸಿದ ಕುಮಾರಸ್ವಾಮಿಗೆ ಹೆಲಿಕಾಪ್ಟರ್ ನಲ್ಲಿ ಹೂವಿನ ಮಳೆ ಸುರಿಸಿ ಅದ್ಧೂರಿ ಸ್ವಾಗತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚರತ್ನ ರಥಯಾತ್ರೆಯೊಂದಿಗೆ ಆಗಮಿಸಿದ ಕುಮಾರಸ್ವಾಮಿಗೆ ಹೆಲಿಕಾಪ್ಟರ್ ನಲ್ಲಿ ಹೂವಿನ ಮಳೆ ಸುರಿಸಿ ಅದ್ಧೂರಿ ಸ್ವಾಗತ

ಕೋಲಾರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸಾಗಿದೆ.

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಕಾರ್ಯಕರ್ತರು ಕುಮಾರಸ್ವಾಮಿಗೆ ಹೂವಿನ ಮಳೆ ಸುರಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿಗೆ ಭರ್ಜರಿ ಸ್ವಾಗತ ನೀಡಲಾಗಿದೆ.

ಕುಮಾರಸ್ವಾಮಿ ನೋಡಲು ಜನರು ಮುಗಿಬಿದ್ದಿದ್ದು, ಜನರನ್ನು ನಿಯಂತ್ರಿಸಲು ಹರಸಾಹಸ ನಡೆಸಲಾಗಿದೆ. ಇದೇ ವೇಳೆ ರೈತರು ಕ್ಯಾಪ್ಸಿಕಂ ಹಾರ ಹಾಕಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಕುಮಾರಸ್ವಾಮಿಯವರೊಂದಿಗೆ ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೆಂಕಟಶಿವಾರೆಡ್ಡಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...