alex Certify ಗೃಹ ಇಲಾಖೆ ಜೊತೆಗೂಡಿ ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕಾನೂನು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಇಲಾಖೆ ಜೊತೆಗೂಡಿ ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕಾನೂನು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಭ್ರೂಣ ಹತ್ಯೆ ತಡೆ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಸೇರಿ ಜಂಟಿಯಾಗಿ ಕಾನೂನು ಜಾರಿಗೆ ಚಿಂತನೆ ನಡೆಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಡ್ಯ, ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣಗಳ ಕುರಿತಾಗಿ ಮಾತನಾಡಿದ ಸಚಿವರು, ಸರ್ಕಾರ ಭ್ರೂಣ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮಂಡ್ಯದಲ್ಲಿ ನಾನು ಎಲ್ಲಾ ಕಡೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸಾರ್ವಜನಿಕರು ಸೇರಿ ಹಲವರಿಂದ ಮಾಹಿತಿ ಪಡೆದು ಪ್ರಕರಣವನ್ನು ಸಿಐಡಿಗೆ ವಹಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...