alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗದಗ, ಧಾರವಾಡ, ಯಾದಗಿರಿ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಒಂದೆರಡು ಕಡೆ, ರಾಯಚೂರು ಜಿಲ್ಲೆಯ ಉತ್ತರ ಭಾಗದ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಪೂರ್ವಭಾಗ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಬೀದರ್ ಜಿಲ್ಲೆಗಳ ಪಶ್ಚಿಮ ಭಾಗ ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದೇ ರೀತಿ ಹಾವೇರಿ, ವಿಜಯನಗರ, ಉತ್ತರ ಕನ್ನಡ ಜಿಲ್ಲೆಯ ಪೂರ್ವ – ದಕ್ಷಿಣದ ತಾಲೂಕುಗಳು, ವಿಜಯನಗರ, ಬಳ್ಳಾರಿ, ದಾವಣಗೆರೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ಹಲವು ಕಡೆ ಮೋಸ ಮುಸುಕಿದ ವಾತಾವರಣವಿದ್ದು, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...