alex Certify BIG NEWS: ಹಂಪಿ ಪುರಂದರ ಮಂಟಪ ಮುಳುಗಡೆ; ರಾಮ ಲಕ್ಷ್ಮಣ, ಯಂತ್ರೋದ್ಧರ ದೇವಾಲಯ ಸಂಪರ್ಕ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಂಪಿ ಪುರಂದರ ಮಂಟಪ ಮುಳುಗಡೆ; ರಾಮ ಲಕ್ಷ್ಮಣ, ಯಂತ್ರೋದ್ಧರ ದೇವಾಲಯ ಸಂಪರ್ಕ ಕಡಿತ

ಬಳ್ಳಾರಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತಿದ್ದು, ಜಲಾಶಯಗಳು ಭರ್ತಿಯಾಗಿವೆ. ಹಲವು ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ.

ಬಳ್ಳಾರಿಯ ತುಂಗಭದ್ರಾ ಡ್ಯಾಂ ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಪರಿಣಾಮ ವಿಜಯನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಹೊಸಪೇಟೆ ತಾಲೂಕಿನ ಹಂಪಿಯ ಪುರಂದರ ಮಂಟಪ, ಸ್ನಾನಘಟ್ಟ ಮುಳುಗಡೆಯಾಗಿದೆ.

ತುಂಗಭದ್ರಾ ಪ್ರವಾಹದಿಂದಾಗಿ ರಾಮ, ಲಕ್ಷ್ಮಣ, ಯಂತ್ರೋದ್ಧರ ದೇವಸ್ಥಾನಕ್ಕೆ ಸಂಪರ್ಕ ಕಡಿತಗೊಂಡಿದ್ದು, ಸುತ್ತಮುತ್ತಲ ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ನದಿ ಪಾತ್ರದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಪ್ರವಾಸಿ ತಾಣಗಳಿಗೆ ತೆರಳದಂತೆ ಪ್ರವಾಸಿಗರಿಗೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...