alex Certify BIG NEWS: ಮಳೆ ಅಬ್ಬರ: ಧರೆಗುರುಳಿದ ಮರಗಳು; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆ ಅಬ್ಬರ: ಧರೆಗುರುಳಿದ ಮರಗಳು; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ಚಿಕ್ಕಮಗಳೂರು: ಕರಾವಳಿ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಬೀಸುತ್ತಿದ್ದು ಹಲವೆಡೆ ಮರಗಳು ಧರೆಗುರುಳಿವೆ. ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿಬಿದ್ದ ಪರಿಣಾಮ ಚಿಕ್ಕಮಗಳೂರು- ಮಂಗಳೂರು ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮರ ಬಿದ್ದ ಪರಿಣಾಮ ಈ ಭಾಗದಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಬಳಿ ಮನೆ ಪಕ್ಕದ ತಡೆಗೋಡೆ ಕುಸಿದುಬಿದ್ದ ಪರಿಣಾಮ 17 ವರ್ಷದ ಯುವಕ ಶೈಲೇಶ್ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮನೆಯ ಮೇಲೆ ಮರಗಳು ಬಿದ್ದಿದ್ದು, ಅವಾಂತರ ಸೃಷ್ಟಿಯಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...