alex Certify BIG NEWS : ಇನ್ಮುಂದೆ ಬಡವರ ಮನೆ ಬಾಗಿಲಿಗೆ ‘ಆರೋಗ್ಯ ಸೇವೆ’ : ರಾಜ್ಯ ಮಟ್ಟದ ‘ಆರೋಗ್ಯ ಮೇಳ’ ನಡೆಸಲು ಸರ್ಕಾರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇನ್ಮುಂದೆ ಬಡವರ ಮನೆ ಬಾಗಿಲಿಗೆ ‘ಆರೋಗ್ಯ ಸೇವೆ’ : ರಾಜ್ಯ ಮಟ್ಟದ ‘ಆರೋಗ್ಯ ಮೇಳ’ ನಡೆಸಲು ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಯಾರೂ ಕೂಡ ಆರೋಗ್ಯ ಸೇವೆಯಿಂದ ವಂಚಿರಾಗಬಾರದು, ಬಡಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕಡೆ ಹಂತ ಹಂತವಾಗಿ ಆರೋಗ್ಯ ಮೇಳ ನಡೆಸಲು ಯೋಜನೆ ಸಿದ್ಧವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಜನವರಿ 29ರಂದು ಕೊಳ್ಳೇಗಾಲದಲ್ಲಿ ಬೃಹತ್ ಆರೋಗ್ಯ ಮೇಳ ನಡೆದು ಅದ್ಭುತ ಯಶಸ್ಸು ಕಂಡಿದೆ. ನಿರೀಕ್ಷೆಗೂ ಮೀರಿ 12 ಸಾವಿರಕ್ಕೂ ಹೆಚ್ಚು ಮಂದಿ ಆರೋಗ್ಯ ಮೇಳದಲ್ಲಿ ಪಾಲ್ಗೊಂಡು ಆರೋಗ್ಯ ಸೇವೆ ಪಡೆದಿದ್ದಾರೆ. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಿಕಿತ್ಸೆ ಪಡೆದುಕೊಂಡಿರುವುದು ಸಂತಸ ತಂದಿದೆ.

ನಿಮ್ಮ ಆರೋಗ್ಯ ನಮ್ಮ ಬದ್ಧತೆಯಾಗಿದ್ದು ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...