alex Certify ಹೈದರಾಬಾದ್- ಕರ್ನಾಟಕ ಮೀಸಲಾತಿಯಡಿ ನೇಮಕಗೊಂಡ ನೌಕರರ ವರ್ಗಾವಣೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದ್- ಕರ್ನಾಟಕ ಮೀಸಲಾತಿಯಡಿ ನೇಮಕಗೊಂಡ ನೌಕರರ ವರ್ಗಾವಣೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹೈದರಾಬಾದ್ -ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕವಾದ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ಹೈದರಾಬಾದ್ -ಕರ್ನಾಟಕ ಪ್ರದೇಶ ಮೀಸಲಾತಿ ಅಡಿಯಲ್ಲಿ ನೇಮಕವಾಗಿದ್ದ ಸಬ್ ರಿಜಿಸ್ಟ್ರಾರ್ ಎನ್. ಶ್ರೀಕಾಂತ್ ಅವರನ್ನು ವರ್ಗಾವಣೆ ಮಾಡಿದ ಸರ್ಕಾರದ ಕ್ರಮವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಮತ್ತೊಬ್ಬ ಸಬ್ ರಿಜಿಸ್ಟ್ರಾರ್ ಎಸ್. ನಂದೀಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಹೈದರಾಬಾದ್ -ಕರ್ನಾಟಕ ವ್ಯಾಪ್ತಿ ವರ್ಗಾವಣೆಗೆ ನಿರ್ಬಂಧವಿಲ್ಲ ಎಂದು ಆದೇಶ ನೀಡಿದೆ.

ಕರ್ನಾಟಕ ಸಾರ್ವಜನಿಕ ಉದ್ಯೋಗ(ಹೈದರಾಬಾದ್ -ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲು) ಆದೇಶ 2013ರಲ್ಲಿ ಹೈದರಾಬಾದ್- ಕರ್ನಾಟಕ ಮೀಸಲು ಅಡಿಯಲ್ಲಿ ನೇಮಕವಾದವರನ್ನು ಹೊರ ವ್ಯಾಪ್ತಿಗೆ ವರ್ಗಾವಣೆ ಮಾಡಲು ಸಂಬಂಧಿಸಿದಂತೆ ಯಾವುದೇ ನಿರ್ಬಂಧವಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹೊರ ಪ್ರದೇಶಕ್ಕೆ ವರ್ಗಾವಣೆ ಮಾಡಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...