alex Certify BIG BREAKING: ಕೆಲಸದ ವೇಳೆಯಲ್ಲೇ ಘೋರ ದುರಂತ, ಗುಡ್ಡ ಕುಸಿದು 4 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೆಲಸದ ವೇಳೆಯಲ್ಲೇ ಘೋರ ದುರಂತ, ಗುಡ್ಡ ಕುಸಿದು 4 ಮಂದಿ ಸಾವು

ಕಾರವಾರ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿಯಲ್ಲಿ ದುರಂತ ಸಂಭವಿಸಿದ್ದು, ಮಾಳು ಡೋಯಿಪಡೆ(21), ಲಕ್ಷ್ಮಿ ಡೋಯಿಪಡೆ(38), ಸಂತೋಷ್ ಡೋಯಿಪಡೆ(18) ಹಾಗೂ ಭಾಗ್ಯಶ್ರೀ(21) ಮೃತಪಟ್ಟವರು ಎಂದು ಹೇಳಲಾಗಿದೆ.

ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಕೆಲಸ ಮಾಡುತ್ತಿದ್ದ 7 ಜನರ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ. ಮಂಜುನಾಥ ನಾಗಪ್ಪ ಭಟ್ ಎಂಬುವರಿಗೆ ಸೇರಿದ ತೋಟ ಇದಾಗಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...