alex Certify ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ

ಮಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಬಹುಪತ್ನಿತ್ವ ಪದ್ಧತಿಯಿದ್ದು, ಮುಸ್ಲಿಂ ಮಹಿಳೆಯರ ಗೌರವ, ಸ್ವಾಭಿಮಾನಕ್ಕೆ ಧಕ್ಕೆ ತರುವ ಕ್ರಮ ತಡೆಯುಲು ಸಮಾನ ನಾಗರಿಕ ಸಂಹಿತೆ ಜಾರಿಗೆ ತಂದು ಕರ್ನಾಟಕದಲ್ಲಿ ಬಹು ಪತ್ನಿತ್ವ ಪದ್ಧತಿ ನಿಷೇಧಿಸಲಾಗುವುದು ಎಂದು ತಿಳಿಸಿದ್ದಾರೆ.

ತ್ರಿವಳಿ ತಲಾಖ್ ನಿಷೇಧ, ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮೊದಲಾದ ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೈಗೊಂಡಿದ್ದು, ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲಿದ್ದಾರೆ, ಕರ್ನಾಟಕದಲ್ಲಿಯೂ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...