alex Certify ಸಂವಿಧಾನ ಬದಲಿಸ್ತೀವಿ ಅಂದವರಿಂದ ಸಂಸ್ಕೃತಿ ಬಯಸೋಕೆ ಆಗುತ್ತಾ..? : ಅನಂತ್ ಕುಮಾರ್ ಹೆಗಡೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂವಿಧಾನ ಬದಲಿಸ್ತೀವಿ ಅಂದವರಿಂದ ಸಂಸ್ಕೃತಿ ಬಯಸೋಕೆ ಆಗುತ್ತಾ..? : ಅನಂತ್ ಕುಮಾರ್ ಹೆಗಡೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಅವರ ಸುಸಂಸ್ಕೃತ್ವ ಅವರ ಹೇಳಿಕೆಯಲ್ಲೇ ತೋರಿಸುತ್ತದೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂತ್ರಿಯಾಗಿ ಸಂವಿಧಾನ ಬದಲಿಸ್ತೀವಿ ಅಂದ್ರು. ಅವರಿಂದ ನಾವು ಸಂಸ್ಕೃತಿ ಬಯಸೋಕೆ ಆಗುತ್ತಾ. ಅವರ ಸುಸಂಸ್ಕೃತ್ವ ಅವರ ಹೇಳಿಕೆಯಲ್ಲೇ ತೋರಿಸುತ್ತದೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯದ ಮುಖ್ಯ ಮಂತ್ರಿಗೆ ಗೌರವ ಕೊಡುವವರೂ ಇದ್ದಾರೆ, ಗೌರವ ಕೊಡದವರು ಕೂಡ ಇದ್ದಾರೆ. ಭಾಷೆ ಬಳಕೆ ಗೊತ್ತಿಲ್ಲ ಅಂದರೆ ಅವರು ಮನುಷ್ಯರಾ..? ಕೆಟ್ಟ ಪದ ಬಳಕೆ ಅವರ ಘನತೆಗೆ ಧಕ್ಕೆ ತರುತ್ತದೆ ಎಂದರು.

ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ ‘ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ಧಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿದ್ದರಾಮಯ್ಯ ನಮ್ಮ ವಿರೋಧಿ ಎಂದು ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...