alex Certify ಹೋಳಿ ಆಡಿದ ನಂತರ ಸ್ನಾನಕ್ಕೆ ಹೋದಾಗಲೇ ದುರಂತ, ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಳಿ ಆಡಿದ ನಂತರ ಸ್ನಾನಕ್ಕೆ ಹೋದಾಗಲೇ ದುರಂತ, ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಹೋಳಿ ಆಡಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಾಗನೂರ ಗ್ರಾಮದ ಬಳಿ ವರದಾ ನದಿಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.

ಮಹೇಶ ಮುರುಡಣ್ಣನವರ ಮತ್ತು ವೀರೇಶ್ ಅಕ್ಕಿವಳ್ಳಿ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ. ಇಬ್ಬರೂ 10 ವರ್ಷದವರಾಗಿದ್ದು, 7 ವರ್ಷದ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಆತನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರು ಹುಡುಕಾಟದ ನಂತರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನೂರು ಗ್ರಾಮದ ಬಳಿ ಹೋಳಿ ನಂತರ ವರದಾ ನದಿಯಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...