alex Certify ಮತ್ತೊಂದು ಮರ್ಯಾದಾಗೇಡು ಹತ್ಯೆ: ಬೇರೆ ಜಾತಿ ಹುಡುಗನ ಸಂಬಂಧ ಬೆಳೆಸಿದ ಮಗಳನ್ನು ಕಾಲುವೆಗೆ ನೂಕಿದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಮರ್ಯಾದಾಗೇಡು ಹತ್ಯೆ: ಬೇರೆ ಜಾತಿ ಹುಡುಗನ ಸಂಬಂಧ ಬೆಳೆಸಿದ ಮಗಳನ್ನು ಕಾಲುವೆಗೆ ನೂಕಿದ ತಂದೆ

ಮಗಳು ಬೇರೆ ಸಮುದಾಯದ ಹುಡುಗನ ಜೊತೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ತಂದೆಯೇ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿರುವ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಗಳಿಗೆ ಹಲವು ಬಾರಿ ಎಚ್ಚರಿಕೆ ನೀಡಿದರೂ, ಆತನೊಂದಿಗೆ ಸಂಬಂಧವನ್ನು ಮುಂದುವರಿಸಲು ನಿರ್ಧರಿಸಿದ್ದಳು. ಇದರಿಂದ ಕುಪಿತಗೊಂಡ ಆತ ತನ್ನ ಮಗಳನ್ನು ಬಳ್ಳಾರಿ ಜಿಲ್ಲೆಯ ಕುಡತಿನಿ ಎಂಬಲ್ಲಿ ನೀರಿಗೆ ತಳ್ಳಿದ್ದಾನೆ. ಕೃತ್ಯ ಎಸಗಿದ ಬಳಿಕ ಪೊಲೀಸರ ಬಳಿ ತೆರಳಿ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಅಕ್ಟೋಬರ್ 31 ರಂದು ಈ ಕೃತ್ಯ ನಡೆದಿದ್ದು, ಆರೋಪಿ ಓಂಕಾರ್ ಗೌಡ ತನ್ನ ಮಗಳನ್ನು ಸಿನಿಮಾಗೆ ಕರೆದುಕೊಂಡು ಹೋಗುತ್ತಿರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ.  ನಂತರ ಸಿನಿಮಾ ಶುರುವಾಗಿದೆ ಎಂದು ಥಿಯೇಟರ್ ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದಾರೆ. ಆ ಪ್ರದೇಶದ ಹೈಲೆವೆಲ್ ಕಾಲುವೆಗೆ ಕರೆದೊಯ್ದು ನೀರಿಗೆ ತಳ್ಳಿದ್ದಾನೆ.

ಸಹಾಯಕ್ಕಾಗಿ ಬಾಲಕಿ ಕೂಗಿಕೊಂಡರೂ ಆಕೆಯ ತಂದೆ ಸಹಾಯ ಮಾಡಲಿಲ್ಲ. ಅವಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಓಂಕಾರ್ ಗೌಡ ತನ್ನ ಮಗಳನ್ನು ಕೊಂದಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಬಾಲಕಿಯ ಶವಕ್ಕಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...