ಬೆಂಗಳೂರು : ಬರ್ತ್ ಡೇ ಆಚರಿಸಲು ತೆರಳುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸೀಗೇಬಾವಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಮೇಶ್ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಬರ್ತ್ ಡೇ ಆಚರಿಸಿಕೊಳ್ಖಲು ಇಬ್ಬರು ಯುವಕರು ಹೊನ್ನವಿಲೆಯಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಬೊಲೆರೊ ವಾಹನವೊಂದು ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಹಲವು ಅಪಘಾತ , ಆತ್ಮಹತ್ಯೆ ಪ್ರಕರಣಗಳು ನಡೆದಿದೆ.