alex Certify BREAKING : ಹಾವೇರಿಯಲ್ಲಿ ಘೋರ ಘಟನೆ : ಬೆಂಕಿ ಹಚ್ಚಿಕೊಂಡು ‘PUC’ ವಿದ್ಯಾರ್ಥಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಘೋರ ಘಟನೆ : ಬೆಂಕಿ ಹಚ್ಚಿಕೊಂಡು ‘PUC’ ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ : ಹಾವೇರಿಯಲ್ಲಿ ಘೋರ ಘಟನೆ ನಡೆದಿದ್ದು, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯಸಿ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಾಂಶುಪಾಲರ ಕಿರುಕುಳಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.  ಪ್ರಾಂಶುಪಾಲೆ ಅನಿತಾ ಹೊಸಮನಿ ವಿರುದ್ಧ ಆರೋಪ ಕೇಳಿಬಂದಿದ್ದು, ಆದಿತ್ಯ ಕಾಲೇಜಿಗೆ ಸರಿಯಾಗಿ ಹೋಗುತ್ತಿರಲಿಲ್ಲ, ಇದಕ್ಕೆ ಪ್ರಿನ್ಸಿಪಾಲರು ಕರೆದು ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...