alex Certify BREAKING : ರಾಯಚೂರಲ್ಲಿ ದಾರುಣ ಘಟನೆ : ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿನಿ ಕಾಲಿನ ಬೆರಳು ಕಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರಲ್ಲಿ ದಾರುಣ ಘಟನೆ : ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿನಿ ಕಾಲಿನ ಬೆರಳು ಕಟ್

ರಾಯಚೂರು : ರಾಯಚೂರಲ್ಲಿ ದಾರುಣ ಘಟನೆ ನಡೆದಿದ್ದು, ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿನಿ ಕಾಲಿನ ಬೆರಳು ಕಟ್ ಆಗಿದೆ.

ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಶ್ರೀದೇವಿ ಎಂಬ ಬಾಲಕಿಯ ಕಾಲಿನ ಬೆರಳು ಕಟ್ ಆಗಿದ್ದು, ಕೆಲಹೊತ್ತು ಒದ್ದಾಡಿದ್ದಾಳೆ. ನಂತರ ಶ್ರೀದೇವಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯ ಮೇಲ್ಛಾವಣಿ ಕುಸಿಯೋ ಹಂತದಲ್ಲಿದ್ದರೂ ಮಕ್ಕಳನ್ನು ಕೂರಿಸಿ ತರಗತಿ ನಡೆಸಲಾಗಿದ್ದು, ಶಿಕ್ಷಕರ ನಿರ್ಲಕ್ಷ್ಯಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...