
ಆದರೆ ಶನಿವಾರದಂದು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರವಾದ ಹವಾಮಾನ ಪರಿಸ್ಥಿತಿ ಹಲವು ಆತಂಕದ ಕ್ಷಣಗಳಿಗೆ ಕಾರಣವಾಯಿತು. ಭಾರೀ ಮಂಜು ಮತ್ತು ಬಿರುಗಾಳಿಯಿಂದ ವಿಮಾನಗಳು ನಿಲ್ದಾಣದಲ್ಲಿ ಇಳಿಯಲು ಹೆಣಗಾಡಿದವು.
ಅಂತಹ ಅಪಾಯಕಾರಿ ಹವಾಮಾನ ಪರಿಸ್ಥಿತಿಗಳಲ್ಲಿ ವಿಮಾನಗಳನ್ನು ಏಕೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದು ನೆಟ್ಟಿಗರು ಪ್ರಶ್ನಿಸುವುದರೊಂದಿಗೆ ವಿಮಾನ ಲ್ಯಾಂಡಿಂಗ್ನ ಭಯಾನಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಹವಾಮಾನ ವೈಪರೀತ್ಯದಿಂದ ವಿಮಾನ ಇಳಿಸಲು ಸವಾಲುಗಳನ್ನು ಎದುರಿಸಿದ ಚಾಲಕ ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಮಾಡದೇ ತನ್ನ ನಿರ್ಧಾರ ಬದಲಿಸುವಂತಾಯಿತು. ಏತನ್ಮಧ್ಯೆ ಮತ್ತೊಂದು ವಿಮಾನವು ಕ್ರಾಸ್ವಿಂಡ್ಗಳನ್ನು ಎದುರಿಸಲು ಮತ್ತು ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಯಿತು. ಇದು ವಿಮಾನದಲ್ಲಿದ್ದವರಿಗೆ ಕೈಯಲ್ಲಿ ಜೀವ ಹಿಡಿದುಕೊಳ್ಳುವಂತಹ ಅನುಭವ ನೀಡಿತು.
ಪುದುಚೇರಿ ಮತ್ತು ತಮಿಳುನಾಡು ಕರಾವಳಿಯಲ್ಲಿ ಭೂಕುಸಿತವನ್ನು ಉಂಟುಮಾಡಿದ ಫೆಂಗಾಲ್ ಚಂಡಮಾರುತವು ಕಳೆದ ಆರು ಗಂಟೆಗಳ ಪುದುಚೇರಿ ಬಳಿ ಸ್ಥಿರವಾಗಿದೆ. ಕಡಲೂರ್ನಿಂದ ಉತ್ತರಕ್ಕೆ ಸುಮಾರು 30 ಕಿಲೋಮೀಟರ್ ಮತ್ತು ವಿಲ್ಲುಪುರಂನಿಂದ ಪೂರ್ವಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.
Abolsutely insane videos emerging of planes trying to land at the Chennai airport before it was closed off… Why were landings even attempted in such adverse weather? pic.twitter.com/JtoWEp6Tjd
— Akshita Nandagopal (@Akshita_N) December 1, 2024