alex Certify BREAKING NEWS: ಚಾಮರಾಜನಗರ ಆಸ್ಪತ್ರೆಯಲ್ಲಿ ಮತ್ತೆ ಘೋರ ದುರಂತ; ಆಕ್ಸಿಜನ್ ಇಲ್ಲದೇ 10 ಮಂದಿ ಸಾವು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚಾಮರಾಜನಗರ ಆಸ್ಪತ್ರೆಯಲ್ಲಿ ಮತ್ತೆ ಘೋರ ದುರಂತ; ಆಕ್ಸಿಜನ್ ಇಲ್ಲದೇ 10 ಮಂದಿ ಸಾವು…?

ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಇತ್ತೀಚೆಗಷ್ಟೇ 24 ಮಂದಿ ಸೋಂಕಿತರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ನಿನ್ನೆ ರಾತ್ರಿ ಕೂಡ ಆಕ್ಸಿಜನ್ ಕೊರತೆಯಿಂದ ಮತ್ತೆ ಹತ್ತು ಮಂದಿ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ.

ಮೆಡಿಕಲ್ ಆಕ್ಸಿಜನ್ ಬೆಡ್ ಇಲ್ಲದ ಕಾರಣ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರೋಗಿಗಳಿಗೆ ಆಕ್ಸಿಜನ್ ಒದಗಿಸಲು ಪರಿಕರಗಳು ಇಲ್ಲ. ಆಸ್ಪತ್ರೆಯಲ್ಲಿ 400 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಮತ್ತೊಂದು ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಆಸ್ಪತ್ರೆಯಲ್ಲಿ ಆಕ್ಸಿಜನ್ ಇದ್ದರೂ ಕೂಡ ಪರಿಕರಗಳು ಇಲ್ಲದ ಕಾರಣ ಪೂರೈಕೆ ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...