alex Certify ಕೇರಳ ವಿದ್ಯಾರ್ಥಿಗಳ ಪುಂಡಾಟ, ಪೊಲೀಸರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳ ವಿದ್ಯಾರ್ಥಿಗಳ ಪುಂಡಾಟ, ಪೊಲೀಸರ ಮೇಲೆ ಹಲ್ಲೆ

ಮಂಗಳೂರು: ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ಓದುತ್ತಿರುವ ಕೇರಳ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹಾಸ್ಟೆಲ್ ಆವರಣದಲ್ಲಿ ಗಲಾಟೆ ನಡೆದಿದೆ. ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಪೊಲೀಸರ ಮೇಲೆಯೂ ಕಲ್ಲು ತೂರಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 9 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಖಾಸಗಿ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ಓದುತ್ತಿರುವ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಬಳಿ ಸ್ನೇಹಿತೆಯನ್ನು ಭೇಟಿಯಾಗಿ ಮಾತನಾಡಿಸಿದ್ದಾನೆ. ಈ ವೇಳೆ ಆತನ ಮೇಲೆ ಕೆಲವು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯ ಬಳಿಕ ಕೇರಳದ ಎರಡು ವಿದ್ಯಾರ್ಥಿಗಳ ತಂಡಗಳ ನಡುವೆ ಗಲಾಟೆ ನಡೆದಿದ್ದು, ಹೊಡೆದಾಡಿಕೊಂಡಿದ್ದಾರೆ.

ತಡೆಯಲು ಬಂದ ಪಾಂಡೇಶ್ವರ ಠಾಣೆ ಪೊಲೀಸರು ಮತ್ತು ಸ್ಥಳೀಯರ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಐವರು ಪೊಲೀಸರು, 7 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...