alex Certify ಕೆಲಸಕ್ಕೆ ತೆರಳುತ್ತಿದ್ದ ವೇಳೆ ತಲೆ ಮೇಲೆ ಬಿದ್ದ ಕಬ್ಬಿಣ ರಾಡ್: ಎಎಸ್ಐ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸಕ್ಕೆ ತೆರಳುತ್ತಿದ್ದ ವೇಳೆ ತಲೆ ಮೇಲೆ ಬಿದ್ದ ಕಬ್ಬಿಣ ರಾಡ್: ಎಎಸ್ಐ ಗಂಭೀರ

ಹುಬ್ಬಳ್ಳಿ: ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ ಸಂಭವಿಸಿದೆ.

ಉಪನಗರ ಠಾಣೆಯ ಎಎಸ್ಐ ನಾಭಿರಾಜ ದಯಣ್ಣನವರ(59) ಅವರ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಮಗಾರಿ ಸ್ಥಳದಲ್ಲಿ ಅವೈಜ್ಞಾನಿಕವಾಗಿ ಕಬ್ಬಿಣದ ಸಲಾಕೆ ಜೋಡಿಸುವ ಸಂದರ್ಭದಲ್ಲಿ ಅವರ ತಲೆ ಮೇಲೆ ರಾಡ್ ಬಿದ್ದು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.

ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ರಕ್ತಸ್ರಾವವಾಗಿದ್ದ ನಾಭಿರಾಜ ದಯಣ್ಣನವರ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನರ ಓಡಾಟ ಹೆಚ್ಚಾಗಿರುವಾಗಲೇ ಹಾಡ ಹಗಲೇ ಕಬ್ಬಿಣದ ಸಲಾಕೆಗಳನ್ನು ಅವೈಜ್ಞಾನಿಕವಾಗಿ ಜೋಡಿಸಲಾಗುತ್ತಿದೆ ಇದೇ ಅವಘಡಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...