alex Certify BIG NEWS: ಹುಬ್ಬಳ್ಳಿ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಮ್ಯಾನೇಜರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಬ್ಬಳ್ಳಿ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಮ್ಯಾನೇಜರ್ ಅರೆಸ್ಟ್

ಹುಬ್ಬಳ್ಳಿ; ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ತಾರಿಹಾಳದಲ್ಲಿರುವ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳಲ್ಲಿ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಳಿದ ಐದು ಜನರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದೀಗ ಫ್ಯಾಕ್ಟರಿಯ ಮ್ಯಾನೇಜರ್ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ. ಫ್ಯಾಕ್ಟರಿ ಮಾಲೀಕ ಅಬ್ದುಲ್ ಖಾದಿರ್ ಶೇಖ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೃತ ಮಹಿಳೆ ವಿಜಯಲಕ್ಷ್ಮಿ ಪತಿ ವೀರಭದ್ರ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 286, 337, 338, 304, ಸ್ಫೋಟಕ ಕಾಯ್ದೆ 1908 ಅಡಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...