alex Certify BIG NEWS: ಅಲ್ಪಸಂಖ್ಯಾತರು ಅಮಾಯಕರು; ವೋಟ್ ಬ್ಯಾಂಕ್ ಗಾಗಿ ಕೆಲ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದ ಸಚಿವ ಆನಂದ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಲ್ಪಸಂಖ್ಯಾತರು ಅಮಾಯಕರು; ವೋಟ್ ಬ್ಯಾಂಕ್ ಗಾಗಿ ಕೆಲ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದ ಸಚಿವ ಆನಂದ್ ಸಿಂಗ್

 

ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಅಲ್ಪಸಂಖ್ಯಾತರು ಮುಗ್ದರು. ಅನಗತ್ಯವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ಅಲ್ಪಸಂಖ್ಯಾತರು ಅಮಾಯಕರು, ಅವರಲ್ಲಿನ ಕೆಲ ಬುದ್ಧಿವಂತ ಲೀಡರ್ ಗಳು ಇವರನ್ನು ನಿಯಂತ್ರಿಸುತ್ತಿದ್ದಾರೆ. ಕೆಲ ನಾಯಕರು ವೋಟ್ ಬ್ಯಾಂಕ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಸ್ಲಿಂ ರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ಅಮಾಯಕತೆಯನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಲಾಗುತ್ತಿದೆ. ಕಾಂಗ್ರೆಸ್ ನಾಯಕರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಆಗಲಿ ಎಲ್ಲರೂ ಸಮಾನರು. ಸಂವಿಧಾನದ ಚೌಕಟ್ಟಿನಲ್ಲಿ ನಡೆಯಬೇಕು. ಅಮಾಯಕರನ್ನು ಹಿಡಿದುಕೊಂಡು ಗಲಾಟೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...