alex Certify ಮಾಂಸಖಂಡ ಕಿತ್ತು ಬರುವಂತೆ ಪತ್ನಿ ಮೂಗನ್ನು ಕಚ್ಚಿದ ಪತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಂಸಖಂಡ ಕಿತ್ತು ಬರುವಂತೆ ಪತ್ನಿ ಮೂಗನ್ನು ಕಚ್ಚಿದ ಪತಿ…!

ಮದ್ಯ ವ್ಯಸನಿ ಪತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಮಾಂಸಖಂಡ ಕಿತ್ತುಬರುವಂತೆ ಆಕೆಯ ಮೂಗನ್ನು ಕಚ್ಚಿ ತುಂಡರಿಸಿರುವ ವಿಲಕ್ಷಣ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಉಮೇಶ ತನ್ನ ಪತ್ನಿ ಗೀತಾಳ ಮೂಗನ್ನು ಕಚ್ಚಿ ತುಂಡರಿಸಿದ್ದು, ಆಕೆಯನ್ನು ಈಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ತು ವರ್ಷಗಳ ಹಿಂದೆ ಧಾರವಾಡ ತಾಲೂಕಿನ ಅಮ್ಮಿನಭಾವಿ ನಿವಾಸಿ ಗೀತಾಳೊಂದಿಗೆ ಉಮೇಶ ವಿವಾಹವಾಗಿದ್ದು, ಪತ್ನಿಯ ಶೀಲ ಶಂಕಿಸಿ ಪದೇ ಪದೇ ಜಗಳವಾಡುತ್ತಿದ್ದ ಎನ್ನಲಾಗಿದೆ.

ಇದರಿಂದ ಬೇಸತ್ತ ಆಕೆ ಆರು ವರ್ಷಗಳ ಹಿಂದೆ ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಬಂದು ನೆಲೆಸಿದ್ದು, ಅಲ್ಲಿಗೂ ಬಂದು ಉಮೇಶ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ.

ಶನಿವಾರ ತಡರಾತ್ರಿ ಅಮ್ಮಿನಬಾವಿ ಗ್ರಾಮಕ್ಕೆ ಮತ್ತೆ ಬಂದ ಉಮೇಶ ಪತ್ನಿಯೊಂದಿಗೆ ಜಗಳವಾಡಿ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...