alex Certify ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಹೈದರಾಬಾದ್​​ಗೆ ʼಭಾಗ್ಯ ನಗರʼ ಎಂದು ಮರು ನಾಮಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಹೈದರಾಬಾದ್​​ಗೆ ʼಭಾಗ್ಯ ನಗರʼ ಎಂದು ಮರು ನಾಮಕರಣ

ತೆಲಂಗಾಣದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬಂದಲ್ಲಿ ಹೈದರಾಬಾದ್​ ಹೆಸರನ್ನು ಭಾಗ್ಯ ನಗರ ಎಂದು ಬದಲಾಯಿಸುತ್ತೇವೆ ಎಂದು ಜಾರ್ಖಂಡ್​ ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ರಘುಬರ್​​ ದಾಸ್​ ಹೇಳಿದ್ದಾರೆ.

ಹೈದರರಾಬಾದ್​ ಹೆಸರನ್ನು ಭಾಗ್ಯ ನಗರ ಎಂದು ಬದಲಾಯಿಸುತ್ತೀರೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತವಾಗಿಯೂ ಬದಲಾಯಿಸುತ್ತೇವೆ.

ಕಳೆದ 2 ದಿನಗಳಿಂದ ನಾನು ಗಮನಿಸಿದಂತೆ ಶ್ರೀ ಸಾಮಾನ್ಯನಿಂದ ಹಿಡಿದು ದೊಡ್ಡ ಉದ್ಯಮಿಗಳವರೆಗೆ ಎಲ್ಲರಿಗೂ ಟಿಆರ್​ಎಸ್​ ಸರ್ಕಾರದ ಬಗ್ಗೆ ಅಸಮಾಧಾನವಿದೆ. ಈ ಸರ್ಕಾರಕ್ಕೆ ತೆಲಂಗಾಣ ಜನತೆಗಿಂತ ಕುಟುಂಬ ರಾಜಕಾರಣದ ಬಗ್ಗೆ ಹೆಚ್ಚು ಆಸಕ್ತಿ ಇರುವಂತೆ ತೋರುತ್ತಿದೆ. ಹೀಗಾಗಿ ಜನರು ವಂಶ ರಾಜಕಾರಣವನ್ನು ಕೊನೆಗಾಣಿಸಲು ಬಿಜೆಪಿ ಪರ ಒಲವು ತೋರಿದ್ದಾರೆ ಎಂದು ಹೇಳಿದರು.

ಹೈದರಾಬಾದ್​ನ ಚಾರ್ಮಿನಾರ್​ನಲ್ಲಿರುವ ಭಾಗ್ಯಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ದರ್ಶನವನ್ನು ಪಡೆದ ಬಳಿಕ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹೈದರಾಬಾದ್​ ಹೆಸರು ಮರುನಾಮಕರಣಗೊಳ್ಳಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...