alex Certify BREAKING : ‘ಕರ್ನಾಟಕ ಬಂದ್’ ವೇಳೆ ಹೈಡ್ರಾಮಾ : ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಕರ್ನಾಟಕ ಬಂದ್’ ವೇಳೆ ಹೈಡ್ರಾಮಾ : ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಚಾಮರಾಜನಗರ : ‘ಕರ್ನಾಟಕ ಬಂದ್’ ವೇಳೆ ಹೈಡ್ರಾಮಾ ನಡೆದಿದ್ದು, ಕುತ್ತಿಗೆಗೆ ಶಾಲು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಕಾವೇರಿ ಹೋರಾಟ ನಡೆಯುತ್ತಿರುವಾಗ ಟೈರ್ ಬೆಂಕಿ ಹಚ್ಚುವಾಗ ಪೊಲೀಸರು ತಡೆಯೊಡ್ಡಿದ್ದಾರೆ. ಆದ್ದರಿಂದ ರೈತರೊಬ್ಬರು ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಅಸ್ವಸ್ಥಗೊಂಡಿದ್ದಾರೆ. ನಂತರ ಪೊಲೀಸರು ಪೊಲೀಸ್ ಜೀಪ್ ನಲ್ಲಿಯೇ ರೈತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ರಾಜ್ಯದ ಹಲವು ಲ್ಲೆ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕೂಡ ಪ್ರತಿಭಟನೆ ಕಾವು ಜೋರಾಗಿದೆ.ವಿನೂತನವಾಗಿ ಪ್ರತಿಭಟಿಸುವ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...