ಉಡುಪಿ : ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ., ನಾನೂ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಾನು ಕೂಡ ರಾಮ, ಕೃಷ್ಣ, ಪರಮೇಶ್ವರನ ಭಕ್ತೆ ಅವರು ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ ಎಂದರು.
ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ನಾನು ಕೂಡ ರಾಮ, ಕೃಷ್ಣ, ಪರಮೇಶ್ವರನ ಭಕ್ತೆ, . ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ ರಾಮ ಮಂದಿರ ಬಿಜೆಪಿಯದ್ದೂ ಅಲ್ಲ, ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದರು. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡುವುದಿಲ್ಲ ನಾನು ಪಕ್ಷದ ಅಧ್ಯಕ್ಷ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ ನಾನು ದೈವಿಭಕ್ತರು ಎಂದು ಪದೇಪದೇ ಹೇಳುತ್ತೇನೆ ಎಂದರು,