ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸುತ್ತಿರುವಾಗಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಸರ್ವರ್ ಸ್ತ್ರಾಂಗ್ ಮಾಡಿಕೊಳ್ಳಬೇಕು ಎಂದು ಗೊತ್ತಿಲ್ವಾ..? ಇವರೆಲ್ಲಾ ನಮ್ಮ ಮಂತ್ರಿಗಳು..? ಬರೀ ಬಾಯಿ ಚಪಲಕ್ಕೆ ಮಾತನಾಡುತ್ತಾರೆ ಎಂದು ಕುಹಕವಾಡಿದ್ದಾರೆ. ಡಿಸಿಸಿ ಬ್ಯಾಂಕ್ ಹಗರಣ ಒಂದಿದೆ, ಹಗರಣದ ಬಗ್ಗೆ ತನಿಖೆ ನಡೆದ್ರೆ ಯಾರ್ಯಾರು ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್ಡಿಕೆ ಹೇಳಿದ್ದಾರೆ.
ಇನ್ನೊಂದು ಕಡೆ ವಿದ್ಯುತ್ ಬಿಲ್ ಸಮಸ್ಯೆ ಉಂಟಾಗಿದೆ. ಕಾಲೇಜಿಗೆ 35 ಲಕ್ಷ ಕರೆಂಟ್ ಬಿಲ್ ಬಂದಿದೆ ಎಂದು ವಿಟಿಯು ವಿಸಿ ಬಾಯಿಬಡ್ಕೊಂತಿದಾರೆ..ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಕ್ಕಿ ವಿಚಾರದಲ್ಲೂ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ: ಸಚಿವ M.B ಪಾಟೀಲ್
ಬೆಂಗಳೂರು : ಅಕ್ಕಿ ವಿಚಾರದಲ್ಲೂ ಬಿಜೆಪಿಯವರು (BJP) ರಾಜಕೀಯ ಮಾಡುವುದು ಸರಿಯಲ್ಲ, ಕೇಂದ್ರದ ಬಳಿ ಮಾತನಾಡಿ ಅಕ್ಕಿ ಕೊಡಿಸಿದ್ದರೆ ರಾಜ್ಯ ಬಿಜೆಪಿಗೆ ಒಳ್ಳೆಯ ಹೆಸರು ಬರುತ್ತಿತ್ತು ಎಂದು ಸಚಿವ ಎಂ.ಬಿ ಪಾಟೀಲ್ (Minister M B Patil) ಹೇಳಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿವರು ರಾಜಕೀಯ ಮಾಡುವುದು ಬಿಟ್ಟು ರಾಜ್ಯಕ್ಕೆ ಅಕ್ಕಿ ಕೊಡಿಸುವ ಕೆಲಸ ಮಾಡಬೇಕು. ಬಿಜೆಪಿಯ ಅನಂತ್ ಕುಮಾರ್ ಅವರು ಯಾವಾಗಲೂ ರಾಜ್ಯದ ಪರ ನಿಲ್ಲುತ್ತಿದ್ದರು. ಆ ಕೆಲಸವನ್ನು ಈಗಿನ ಬಿಜೆಪಿಯವರು ಯಾಕೆ ಮಾಡುತ್ತಿಲ್ಲ.ಅದು ಬಿಟ್ಟು ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ನಾವೇನು ಕೇಂದ್ರ ಸರ್ಕಾರದ ಬಳಿ ಪುಕ್ಕಟೆಯಾಗಿ ಅಕ್ಕಿ ಕೇಳುತ್ತಿಲ್ಲ. ಬಿಜೆಪಿಯವರೇ ಅಕ್ಕಿ ಕೊಡಿಸಿದರೆ ಅವರಿಗೆ ಒಳ್ಳೆಯ ಹೆಸರು ಬರುತ್ತಿತ್ತು.
ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿದವನಲ್ಲ. ನಾನು ಅನುಭವ ಮಂಟಪದಿಂದ ಬಂದವನು. ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ನನಗೆ ಯಾರಾದ್ರೂ ಬೈದರೆ ಲಿಂಗಾಯತರಿಗೆ ಬೈದಂತಾಗುತ್ತಾ? ಕೆಲವರು ಇದನ್ನೇ ರಾಜಕೀಯ ಮಾಡುತ್ತಾರೆ ಎಂದು ಹೇಳಿದ್ರು.