alex Certify ಹದಗೆಟ್ಟ ರಸ್ತೆ ಅಭಿವೃದ್ಧಿಯಾಗುವವರೆಗೆ ಬರಿಗಾಲಲ್ಲೇ ಇರುತ್ತೇನೆ: ಸಚಿವರಿಂದಲೇ ಪ್ರತಿಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹದಗೆಟ್ಟ ರಸ್ತೆ ಅಭಿವೃದ್ಧಿಯಾಗುವವರೆಗೆ ಬರಿಗಾಲಲ್ಲೇ ಇರುತ್ತೇನೆ: ಸಚಿವರಿಂದಲೇ ಪ್ರತಿಜ್ಞೆ

ಗ್ವಾಲಿಯರ್: ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮ್ನ್ ಸಿಂಗ್ ತೋಮರ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ಸ್ಥಿತಿ ಸುಧಾರಿಸುವವರೆಗೆ ಬರಿಗಾಲಿನಲ್ಲಿ ಇರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಅವರು ತಮ್ಮ ವಿಧಾನಸಭಾ ಕ್ಷೇತ್ರದ ರಸ್ತೆಗಳ ಹಠಾತ್ ಪರಿಶೀಲನೆ ನಡೆಸಿದ್ದಾರೆ. ತಮ್ಮ ಪ್ರದೇಶದಲ್ಲಿನ ಹದಗೆಟ್ಟ ರಸ್ತೆಗಳನ್ನು ಪರಿಶೀಲಿಸುತ್ತಿದ್ದ ವೇಳೆ ಸಾರ್ವಜನಿಕರು ಈ ಭಾಗದ ರಸ್ತೆ ಹದಗೆಟ್ಟಿರುವುದರಿಂದ ತೊಂದರೆ ಅನುಭವಿಸುತ್ತಿದ್ದೇವೆ ಎಂದು ನೋವು ತೋಡಿಕೊಂಡರು.

ಕನಿಷ್ಠ ರಸ್ತೆ ಗುಂಡಿಗಳನ್ನೂ ಮುಚ್ಚಿಲ್ಲ ಎಂದು ಅಧಿಕಾರಿಗಳಿಗೆ ಛೀಮಾರಿ ಹಾಕಿದ ಸಚಿವ ತೋಮರ್, ಕೈಮುಗಿದು ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿ ನಿರ್ಣಯ ಕೈಗೊಂಡರು.

ಗ್ವಾಲಿಯರ್ ವಿಧಾನಸಭಾ ಕ್ಷೇತ್ರದ ರಸ್ತೆಗಳ ಸ್ಥಿತಿ ಸುಧಾರಿಸದ ಹೊರತು ನಾನು ಚಪ್ಪಲಿ ಮತ್ತು ಬೂಟುಗಳನ್ನು ಧರಿಸುವುದಿಲ್ಲ, ನಾನು ಬರಿಗಾಲಿನಲ್ಲಿಯೇ ಇರುತ್ತೇನೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...